ಅಕ್ರಮ ಮರ ಸಾಗಾಟ: ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ವಶ

Share with

ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿದ್ದಾರೆ.

ವಾಹನ ಮತ್ತು ಅಮಾನತು ಪಡಿಸಿದ ಸೊತ್ತುಗಳ ಮೌಲ್ಯ 6 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಮತ್ತು ಉಳ್ಳಾಲ ತಾಲೂಕು ಸಜಿಪಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇಬ್ಬರು ಆರೋಪಿತರ ಮೇಲೆ ತಕ್ಷೀರು ದಾಖಲಿಸಲಾಗಿದೆ.

ಪ್ರಕರಣದಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಪಿ, ಉಪವಲಯ ಅರಣ್ಯಾಧಿಕಾರಿ ಯಶೋಧರ, ಗಸ್ತು ಅರಣ್ಯಪಾಲಕರಾದ ಜಿತೇಶ್ ಪಿ, ಶೋಬಿತ್, ಶ್ರೀಮತಿ ಸ್ಮಿತಾ ಮತ್ತು ರೇಖಾ ಸಚಿನ್, ಅರಣ್ಯ ವೀಕ್ಷಕರಾದ ಭಾಸ್ಕರ್ ಹಾಗೂ ಇಲಾಖಾ ವಾಹನ ಚಾಲಕ ಜಯರಾಮ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ. ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಇವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಪಿ ಇವರು ನಡೆಸಲಿದ್ದಾರೆ.


Share with

Leave a Reply

Your email address will not be published. Required fields are marked *