ಪುತ್ತೂರು: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಪುತ್ತೂರು ಘಟಕದ ಆಶ್ರಯದಲ್ಲಿ ಬಿಲ್ಲವ ವಧು-ವರಾನ್ವೇಷಣೆ 2023 ಕಾರ್ಯಕ್ರಮ ಜು.09 ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗುತ್ತಿದೆ.
![](https://i0.wp.com/veekshakavani.com/wp-content/uploads/2023/07/New-Project-7-1.jpg?resize=640%2C400&ssl=1)
ಕಾರ್ಯಕ್ರಮವನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ಯುವವಾಹಿನಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳು ಪದಾಧಿಕಾರಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗಿಯಾಗಿದ್ದಾರೆ.