ಉಪ್ಪಳ: ಕುಬಣೂರು ವಿದ್ಯಾನಗರದಲ್ಲಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಬಳಿಯಲ್ಲಿ ನಿರ್ಮಿಸಲಾದ ಅಯೋಧ್ಯ ಫ್ರೆಂಡ್ಸ್ ಕ್ಲಬ್ನ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಏಪ್ರಿಲ್ 6 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ 7.30ರಿಂದ ಗಣಹೋಮ, ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ದೀಪ ಪ್ರಜ್ವಲನೆಗೊಳಿಸಿ, ಆಶೀರ್ವಚನ ನೀಡುವರು. ಸಂಜೆ 6ರಿಂದ ವಿವಿಧ ತಂಡಗಳಿಂದ ಕುಣಿತ ಭಜನೆ ಮತ್ತು ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 7ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸುವರು. ಹಲವು ಗಣ್ಯರು ಉಪಸ್ಥಿತರಿರುವರು. ಬಳಿಕ ಸಂಗೀತ ರಂಸಮಂಜರಿ ಕಾರ್ಯಕ್ರಮ ನಡೆಯಲಿದೆ.