ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಉಪ್ಪಳಗೇಟ್ ಬಳಿ ವಾಹನ ಅಪಘಾತ ಹೆಚ್ಚಾಗುತ್ತಿದ್ದು, ಎರಡೂವರೆ ತಿಂಗಳಲ್ಲಿ ಮೂವರು ಮೃತಪಟ್ಟಿದ್ದಾರೆ.


ಪ್ರತಿ ದಿನ ಇಲ್ಲಿ ಅಪಘಾತಗಳು ನಡೆಯುತ್ತಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ನವೀಕರಣ ನಡೆಸುವ ವೇಳೆ ಅಪಘಾತ ನಿಯಂತ್ರಿಸುವ ಸಂಬಂಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.




