ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

Share with

ಪೋಷಕರು ಶಿಕ್ಷಕರ ಪ್ರೋತ್ಸಾಹದಿಂದ ಈ‌ ಸಾಧನೆ ಮಾಡಲು ಸಾಧ್ಯವಾಯಿತು: ಸಹನಾ ಎನ್

ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ ಎನ್ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾಳೆ.
ಫಲಿತಾಂಶ ತಿಳಿಯುತ್ತಿದ್ದಂತೆ ಶಾಲೆಯ ಮುಖ್ಯೋಪಾಧ್ಯಾಯನಿ ಉಷಾ ಸಹನಾಗೆ ಸಿಹಿ ತಿನ್ನಿಸಿ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಹನಾ, 623 ಅಂಕ ಪಡೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಪೋಷಕರು ಶಿಕ್ಷಕರ ಪ್ರೋತ್ಸಾಹದಿಂದ ಈ ಅಂಕ ಪಡೆಯಲು ಸಾಧ್ಯವಾಗಿದೆ. ಶಾಲೆಯಲ್ಲಿ ನಿರಂತರ ಪರೀಕ್ಷೆಗಳನ್ನು ಮಾಡುತ್ತಿದ್ದರು. ಹಳೆ ಪ್ರಶ್ನೆ ಪತ್ರಿಕೆಗಳ ರಿವಿಜನ್ ಮಾಡಿಸುತ್ತಿದ್ದರು. ತಜ್ಞ, ತರಬೇತುದಾರರ ಮೂಲಕ ಕೋಚಿಂಗ್ ಕೊಡಿಸುತ್ತಿದ್ದರು. ನಿರಂತರ ಓದಿಗೆ, ಏಕಾಗ್ರತೆಗೆ ಆದ್ಯತೆ ನೀಡುತ್ತಿದ್ದರು. ನನ್ನ ಜೀವನದಲ್ಲಿ ತಂದೆ ತಾಯಿಯ ಪಾತ್ರ ದೊಡ್ಡದು. ಶಾಲಾ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಗೆ ಧನ್ಯವಾದ ಎಂದಿದ್ದಾರೆ.
ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೋಷಕರು ಮತ್ತು ಶಿಕ್ಷಕರು ಪೂರ್ಣ ಬೆಂಬಲ ನೀಡಬೇಕು ಎಂದು ಹೇಳಿದರು.


Share with

Leave a Reply

Your email address will not be published. Required fields are marked *