ಬೆಂಗಳೂರು: ಕರ್ನಾಟಕ ಬಂದ್ ಕರೆ ಬೆನ್ನಲ್ಲೇ ಇಂದು(ಸೆ.28) ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು(ಸೆ.28) ಮಧ್ಯರಾತ್ರಿ 12 ಗಂಟೆಯಿಂದ ನಾಳೆ(ಸೆ.29) ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
![](https://i0.wp.com/veekshakavani.com/wp-content/uploads/2023/09/New-Project-3.jpg?resize=640%2C400&ssl=1)
ಇನ್ನು 144 ಸೆಕ್ಷನ್ ಜಾರಿ ವೇಳೆ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಬಂದ್ ವೇಳೆ ಆಸ್ತಿ ಪಾಸ್ತಿ ನಾಶ ಮತ್ತು ಸಾವು ನೋವಿಗೆ ಸಂಘಟಕರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.