![ಸಿದ್ದರಾಮಯ್ಯ](https://i0.wp.com/veekshakavani.com/wp-content/uploads/2023/08/ಸಿದ್ದರಾಮಯ್ಯ-1.jpg?resize=640%2C400&ssl=1)
ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕ ರಾಜ್ಯ ದಿವಾಳಿಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಇವರು, ನಮ್ಮ ಪಕ್ಷ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳ ಪರವಾಗಿದೆ. ನಾವು ಈ ಹಿಂದೆಯೂ ನುಡಿದಂತೆ ನಡೆದುಕೊಂಡಿದ್ದೆವು. ಈಗಲೂ ನಾವು ನುಡಿದಂತೆಯೇ ನಡೆದುಕೊಳ್ಳುತ್ತೇವೆ. ನಮ್ಮ ರಾಜ್ಯದಲ್ಲಿ ಗ್ಯಾರಂಟಿಗಳು ಜಾರಿಯಾಗಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ ಎಂದಿದ್ದಾರೆ.