ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Share with

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಸಭೆಯು ಜೂ.26ರಂದು ಸುದ್ದಿ ಅರಿವು ಕೃಷಿ ಕೇಂದ್ರದಲ್ಲಿ ನಡೆಯಿತು.

ಸಂಘದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ ಮಾತನಾಡಿ ಸಂಘ ಸ್ಥಾಪನೆಗೊಂಡು ಹಲವು ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಾ ಇದೆ. ಇದು ಸಂಘದ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಶೈಲಜಸುದೇಶ್ ಚಿಕ್ಕಪುತ್ತೂರು ಮಾತನಾಡಿ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ ಸಂಘದ ಬೆಳವಣಿಗೆಗೆ ಸಹಕರಿಸುತ್ತಿರುವ ಎಲ್ಲಾ ಸದಸ್ಯರುಗಳಿಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ್ ರೈ ಅನಿಕೂಟೇಲು, ಕೋಶಾಧಿಕಾರಿ ಕವಿತಾ ವಿಶ್ವನಾಥ್ ಕುಂಬ್ರ, ಸಂಘಟನಾ ಕಾರ್ಯದರ್ಶಿ ಗೊಪಾಲಕೃಷ್ಣ ಸಂತೋಷ್ ನಗರ, ಜತೆ ಕಾರ್ಯದರ್ಶಿ ದಿಲ್‌ಶಾನ ಕುಂಬ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳ ಆಯ್ಕೆ

2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡಸಲಾಯಿತು. ಅಧ್ಯಕ್ಷರಾಗಿ ಶ್ರೀಧರ್ ರೈ ಕೋಡಂಬು, ಪ್ರಧಾನ ಕಾರ್ಯದರ್ಶಿಯಾಗಿ ಆದಿತ್ಯ ಈಶ್ವರಮಂಗಲ, ಕೋಶಾಧಿಕಾರಿಯಾಗಿ ಅಕ್ಷತಾ ರವಿಚಂದ್ರ, ಉಪಾಧ್ಯಕ್ಷರಾಗಿ ಶಿವಕುಮಾರ್ ಈಶ್ವರಮಂಗಲ, ಜತೆಕಾರ್ಯದರ್ಶಿಯಾಗಿ ಲೋಕಯ್ಯ ಸಂಪ್ಯಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಶ್ವತ್ಥ್ ಶೆಟ್ಟಿರವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.


Share with

Leave a Reply

Your email address will not be published. Required fields are marked *