ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯಲ್ಲಿ ಮೊದಲ ಮಳೆಗೆ ಅವಾಂತರ ಸೃಷ್ಟಿ

Share with

ಉಡುಪಿ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಸಂಪೂರ್ಣ ಕೆಸರು ಮಯವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯ ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಭಾರೀ ಮಳೆಗೆ ರಸ್ತೆ ಕೆಸರುಮಯವಾಗಿ ಅವಾಂತರ ಸೃಷ್ಠಿಯಾಗಿದೆ.

ಸಮರ್ಪಕವಾಗಿ ಚರಂಡಿ ನಿರ್ಮಾಣ ಆಗದೆ ಮತ್ತು ನೀರಿನ ಪೈಪ್ ಲೈನ್ ಕಾಮಗಾರಿಯಿಂದಾಗಿ ಕೆಂಪು ಮಣ್ಣು ರಸ್ತೆಗೆ ಹರಿದುಬಂದಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕೆಸರಿನಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದಾರೆ. ರಸ್ತೆ ಕೆಸರುಮಯವಾಗಿ ಜಾರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಲಿಸುವಂತಾಗಿದೆ. ರಸ್ತೆಯ ಒಂದು ಮಗ್ಗುಲಿನ ಮಣ್ಣು ಕುಸಿದಿದ್ದು, ಬಬ್ಬರ್ಯ ದೈವಸ್ಥಾನದ ಕಡೆಗೆ ಹೋಗುವ ನಾಗರಿಕರಿಗೆ ದಾರಿಯೇ ಇಲ್ಲದಂತಾಗಿದೆ.

ರಸ್ತೆ ವಿಸ್ತರಣೆ ಕಾಮಗಾರಿ ನಡೆದು ತಿರುವು ರಸ್ತೆ ನೇರವಾಗಿ ಸುವ್ಯವಸ್ಥಿತ ರಸ್ತೆಯಾಗುವ ಮೊದಲೇ ಮಳೆ ಅವಾಂತರ ಸೃಷ್ಠಿ ಮಾಡಿದೆ. ಸಂಬಂಧಪಟ್ಟ ಇಲಾಖೆ ಮತ್ತು ಗುತ್ತಿಗೆದಾರರು ವಾಹನ ದಟ್ಟನೆಯಿಂದ ಕೂಡಿರುವ ಈ ರಸ್ತೆಯನ್ನು ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಬೇಕೆಂಬುದು ನಾಗರಿಕರು ಒತ್ತಾಯಿಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *