ದ.ಕ: ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದ ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್ಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ.
ಮಾ.1 ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ ಆಗ್ರಹಿಸಿ ಭಜರಂಗದಳ ಮುಖಂಡ ಭರತ್ ನೇತೃತ್ವದಲ್ಲಿ ಫರಂಗಿಪೇಟೆ ಬಂದ್ ಮಾಡಲಾಗಿತ್ತು. ಗಾಂಜಾ ಗ್ಯಾಂಗ್ ಕೈವಾಡವಿದೆ ಎಂದು ಪ್ರತಿಭಟನೆ ಸಮಯದಲ್ಲಿ ಭರತ್ ಕುಮ್ಡೇಲು ಆರೋಪ ಮಾಡಿದ್ದರು. ಇದೀಗ ದಿಗಂತ್ ಪತ್ತೆಯಾದ ನಂತರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಭರತ್ ಕುಮ್ಡೇಲುಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.





