ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ

Share with

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಬ್ಲಾಕ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಗೌರವಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.

ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಏ ಗಫೂರ್, ಕೆ.ಪಿ.ಸಿ.ಸಿ ವಕ್ತಾರರಾದ ಸುಧೀರ್ ಕುಮಾರ್ ಮುರೋಳ್ಳಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಘ್ಲೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ದಿನೇಶ್ ಪುತ್ರನ್, ಉಡುಪಿ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೈ ಸುಕುಮಾರ್, ನಾಯಕರಾದ ಪ್ರಸಾದ್‌ರಾಜ್ ಕಾಂಚನ್, ಮುರಳಿ ಶೆಟ್ಟಿ, ದಿವಾಕರ್ ಕುಂದರ್, ದೀಪಕ್ ಕೋಟ್ಯಾನ್, ಕಿರಣ್ ಹೆಗ್ಡೆ, ಹರೀಶ್ ಕಿಣಿ, ಸೌರಭ್ ಬಲ್ಲಾಳ್, ಪ್ರಖ್ಯಾತ್ ಶೆಟ್ಟಿ, ಶೇಖ್ ವಾಹೀದ್, ಮಾರ್ಕ್ ಸಲ್ದಾಹ್ನ, ಮಮತಾ ಶೆಟ್ಟಿ, ಪ್ರಶಾಂತ್ ಪೂಜಾರಿ, ರೋಶನ್ ಶೆಟ್ಟಿ, ಗಣೇಶ್ ನೆರ್ಗಿ, ರವಿರಾಜ್ ರಾವ್, ಸುರೇಶ್ ಶೆಟ್ಟಿ ಬನ್ನಂಜೆ, ಸುರಜ್ ಕರ್ಕೇರ, ಪ್ರವೀಣ್ ಜಿ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ, ಕುಶಲ್ ಶೆಟ್ಟಿ, ನರಸಿಂಹಮೂರ್ತಿ, ನಾಸಿರ್ ಯಾಕೂಬ್ ಭಾಗವಹಿಸಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಹಾಗೂ ವಕ್ತಾರ ಸತೀಶ್ ಕೊಡವೂರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ ವಂದಿಸಿದರು.


Share with

Leave a Reply

Your email address will not be published. Required fields are marked *