ಲೋಕಸಭಾ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು; ದ.ಕ. ಡಿಸಿ ಮುಲ್ಲೈ ಮುಗಿಲನ್

Share with

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಎಲ್ಲಾ ಕಾರ್ಮಿಕರಿಗೆ ಶುಕ್ರವಾರ ವೇತನಸಹಿತ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.

‘ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕು. ಮತ ಚಲಾಯಿಸುವ ರಜೆ ನೀಡದಿದ್ದರೆ ಹಾಗೂ ಮತದಾನ ಮಾಡಲು ಅವಕಾಶ ಕಲ್ಪಿಸದಿದ್ದರೆ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ ಕಾಯ್ದೆಯ ಕಲಂ 3-ಎ ಹಾಗೂ1951ರ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ) ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *