
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಅಸಾಧಾರಣ ಶೌರ್ಯ ಮತ್ತು ನಾಯಕತ್ವ ಪ್ರದರ್ಶಿಸಿದ್ದಕ್ಕಾಗಿ ಮೇಜರ್ ಆಶಿಶ್ ದಹಿಯಾ ಅವರಿಗೆ ಶೌರ್ಯ ಚಕ್ರ ನೀಡಲಾಗಿದೆ.
ರಾಷ್ಟ್ರಪತಿ ದೌಪದಿ ಮುರ್ಮು ಈ ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. 2022ರ ಜೂನ್ನಿಂದ ಐದು ಹೈ-ರಿಸ್ಕ್ ಕಾರ್ಯಾಚರಣೆಗಳಲ್ಲಿ ನಾಲ್ಕು ಭಯೋತ್ಪಾದಕರನ್ನು ಹತ್ಯೆ ಮಾಡುವಲ್ಲಿ ಹಾಗೂ ಮೂರು ಐಇಡಿ ನಿಷ್ಕ್ರಿಯಗೊಳಿಸುವಲ್ಲಿ ಆಶಿಶ್ ಪಾತ್ರವನ್ನು ಮನ್ನಿಸಿ ಈ ಪ್ರಶಸ್ತಿ ನೀಡಲಾಗಿದೆ.