ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಬಿದ್ದು ವ್ಯಕ್ತಿ ಸಾವು

Share with

ಕಡಬ ತಾಲೂಕಿನ ಕುದ್ಕೋಳಿ ನಿವಾಸಿ ಅಚ್ಚುತ ಗೌಡ ಮೃತಪಟ್ಟ ವ್ಯಕ್ತಿ.

ಕಡಬ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಿಂದ ಬಿದ್ದು ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಕುದ್ಕೋಳಿ ನಿವಾಸಿ ಅಚ್ಚುತ ಗೌಡ (63) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಅವರು ಭಾನುವಾರ ಸಂಜೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮನೆಗೆ ಹೋಗುತ್ತಿದ್ದು, ಅಂಚೆ ಕಚೇರಿ ಸಮೀಪದ ತಿರುವಿನಲ್ಲಿ ಆಯತಪ್ಪಿ ಅಚ್ಚುತ ಗೌಡ ಮತ್ತು ಬಲ್ಯ ನಿವಾಸಿ ಚಂದ್ರಶೇಖರ ಎಂಬ ಇಬ್ಬರು ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ.

ಗಂಭೀರ ಗಾಯಗೊಂಡ ಅಚ್ಚುತ ಗೌಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಇನ್ನೊಬ್ಬ ವ್ಯಕ್ತಿ ಚಂದ್ರಶೇಖರ್ ಅವರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *