ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
![ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ](https://i0.wp.com/veekshakavani.com/wp-content/uploads/2024/03/ಯುವಕ-ಆತ್ಮಹತ್ಯೆ.jpg?resize=640%2C400&ssl=1)
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಅಭಿಷೇಕ್(27) ಎಂದು ಗುರುತಿಸಲಾಗಿದೆ. ಇವರು ಲಾಡ್ಜ್ ರೂಂನೊಳಗೆ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಭಿಷೇಕ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.