ಮಂಗಳೂರು ಕಟ್ಟಡ ಕುಸಿತದಲ್ಲಿ ಕಾರ್ಮಿಕ ಸಾವು, ಮಳೆಗಾಲದವರೆಗೆ ಕಾಮಗಾರಿ ಸ್ಥಗಿತ

Share with

ಮಂಗಳೂರು: ಮಂಗಳೂರು ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಮಳೆಗೆ ಭೂಕುಸಿತ ಉಂಟಾಗಿ ಕಾರ್ಮಿಕನೋರ್ವ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸೂಚನೆಯೊಂದನ್ನು ಹೊರಡಿಸಿದ್ದು, ಮಳೆಗಾಲ ಮುಕ್ತಾಯದವರೆಗೆ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಮುಂದೆ ಅನಾಹುತ ಆಗುವುದನ್ನು ತಪ್ಪಿಸಬೇಕು. ಆದೇಶ ಪಾಲಿಸದೇ ಇದ್ದರೆ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಮಂಗಳೂರು ಮಹಾ ನಗರ ಪಾಲಿಕೆಯು ಸೂಚಿಸಿದೆ.

ಬಲ್ಮಠದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿ, ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ.

ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯು್ತಿದ್ದ ವೇಳೆ ಭೂಕುಸಿತ ಸಂಭವಿಸಿತ್ತು. ಆ ಸಂದರ್ಭ ಮಳೆಯೊಂದಿಗೆ ಗಾಳಿಯೂ ಇತ್ತು. ಈ ಸಂದರ್ಭ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಘಟನೆ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ, ಎನ್.ಡಿ.ಆರ್.ಎಫ್., ಎನ್.ಡಿ.ಆರ್.ಎಫ್ ತಂಡ ದೌಡಾಯಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿತ್ತು. ಆದರೆ ಮಣ್ಣಿನಡಿ ಸಿಲುಕಿದ್ದ ಚಂದನ್ ಪತ್ತೆ ಕಾರ್ಯಾಚರಣೆ ನಡೆದಿತ್ತು. ರಾತ್ರಿವರೆಗೂ ಅಂದರೆ ಸುಮಾರು ಏಳು ತಾಸುಗಳ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಏಳು ಗಂಟೆ ವೇಳೆ ಮೃತದೇಹವನ್ನು ಎನ್.ಡಿ.ಆರ್.ಎಫ್. ತಂಡ ಹೊರತೆಗೆಯಿತು.


Share with

Leave a Reply

Your email address will not be published. Required fields are marked *