
ಮಂಗಳೂರು: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿ⁶555ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ r ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ.
.5
ಬೆಳಗ್ಗೆ 10ಕ್ಕೆ ಮನೆಯಿಂದ ಹೋಗಿದ್ದು, ತನ್ನ ಮೊಬೈಲ್ ಫೋನ್ ಮತ್ತು ಪರ್ಸ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾರೆ. ಆತನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರುವ ಸಾಧ್ಯತೆಯಿದೆ ಎಂದು ತಂದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಯುವಕನ ಬಗ್ಗೆ ಮಾಹಿತಿ ಇದ್ದಲ್ಲಿ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.