ಮಂಗಳೂರು: ಖಾಸಗಿ ಬಸ್‌ಗೆ ಡೋರ್ ಕಡ್ಡಾಯ-ಕಮಿಷನರ್ ಆದೇಶ

Share with

ಮಂಗಳೂರು: ಖಾಸಗಿ ಬಸ್ ನ ಕಂಡಕ್ಟರ್ ಒಬ್ಬರು ಬಸ್ ನಿಂದ ಬಿದ್ದು ಸಾವನಪ್ಪಿದ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸ್ ಆಯುಕ್ತರು ಎಲ್ಲಾ ಖಾಸಗಿ ಬಸ್ ಗಳಿಗೆ ಬಾಗಿಲು ಆಳವಡಿಸಲು ಸೂಚನೆ ನೀಡಿದ್ದಾರೆ.

ನಂತೂರು ಸರ್ಕಲ್ ನಲ್ಲಿ ಖಾಸಗಿ ಬಸ್ ನಿಂದ ಕಂಡಕ್ಟರ್ ಆಯತಪ್ಪಿ ಬಿದ್ದು ಸಾವನಪ್ಪಿದ ಬೆನ್ನಲ್ಲೇ ಈ ಆದೇಶ ಹೊರ ಬಿದ್ದಿದೆ. ಮಂಗಳೂರಿನಲ್ಲಿ ಸಂಚರಿಸುವ ಎಲ್ಲ ಖಾಸಗಿ ಬಸ್‌ಗಳಿಗೆ ಸುರಕ್ಷತಾ ದೃಷ್ಟಿಯಿಂದ ಬಾಗಿಲು ಅಳವಡಿಸಬೇಕು. ನಿರ್ವಾಹಕರು ಸಹಿತ ಯಾರು ಕೂಡ ಬಾಗಿಲಿನಲ್ಲಿ ನಿಲ್ಲಬಾರದು. ಟೈಮ್ ಕೀಪಿಂಗ್‌ ಗಿಂತ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್ ಜೈನ್ ಬಸ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *