ಮಂಜೇಶ್ವರ ಉಪಜಿಲ್ಲೆಯ 62 ನೇ ಶಾಲಾ ಕಲೋತ್ಸವದ ಸಂಘಟನಾ ಸಮಿತಿಯ ಸಭೆ

Share with

ಉಪ್ಪಳ: ಧರ್ಮತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾ ಸಂಸ್ಥೆಗಳಲ್ಲಿ ನವೆಂಬರ್ 7ರಿಂದ 10ರ ತನಕ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾಕಲೋತ್ಸವದ ಸಂಘಟನಾ ಸಮಿತಿಯ ಸಭೆಯು ಡಿ.24ರಂದು ಹೈಸ್ಕೂಲ್ ಸಭಾಂಗಣದಲ್ಲಿ ಜರಗಿತು.

ಮಂಜೇಶ್ವರ ಉಪಜಿಲ್ಲಾ ಮಟ್ಟದ 62ನೇ ಶಾಲಾಕಲೋತ್ಸವದ ಸಂಘಟನಾ ಸಮಿತಿಯ ಸಭೆಯು ಹೈಸ್ಕೂಲ್ ಸಭಾಂಗಣದಲ್ಲಿ ಜರಗಿತು.

ಮಂಜೇಶ್ವರ ವಿದ್ಯಾಭ್ಯಾಸ ಉಪಜಿಲ್ಲೆಯ ಪ್ರಭಾರ ಸಹಾಯಕ ವಿದ್ಯಾಧಿಕಾರಿ ಜಿತೇಂದ್ರ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಕಲಾ ಉತ್ಸವವನನ್ನು ಧರ್ಮತಡ್ಕ ಊರಿನ ಮಹಾ ಉತ್ಸವವನ್ನಾಗಿಸಿದ ಕಲೋತ್ಸವ ಸಮಿತಿಗೂ ಸಹಕಾರವನ್ನಿತ್ತ ಊರ ಬಾಂಧವರಿಗೂ, ವಿದ್ಯಾಭಿಮಾನಿಗಳಿಗೂ ಅಭಿನಂದನೆಯನ್ನು ಸಲ್ಲಿಸಿದರು.

ಶಾಲಾ ವ್ಯವಸ್ಥಾಪಕರಾದ ಶಂಕರನಾರಾಯಣ ಭಟ್, ವ್ಯವಸ್ಥಾಪಕಿ ವಿಜಯಶ್ರೀ ಬಿ, ಎಚ್.ಎಂ ಫೋರಂ ಸಹ ಕಾರ್ಯದರ್ಶಿ ಸತ್ಯಪ್ರಕಾಶ್, ಎಂ.ಪಿ.ಟಿ.ಎ ಅಧ್ಯಕ್ಷೆ ಪುಷ್ಪಾ ಕಮಲಾಕ್ಷ, ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯ ಅಶೋಕ ಭಂಡಾರಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮುಂತಾದವರು ಶುಭವನ್ನು ಹಾರೈಸಿದರು.

ರಾಮಮೋಹನ್ ಸಿ.ಎಚ್ ಲೆಕ್ಕಪತ್ರವನ್ನು ಮಂಡಿಸಿದರು. ಸಭಿಕರ ಸರ್ವ ಸಹಮತದೊಂದಿಗೆ ಕಲೋತ್ಸವದ ಸಂಘಟನಾ ಸಮಿತಿಯನ್ನು ವಿಸರ್ಜಿಸಲಾಯಿತು. ಪ್ರಾಂಶುಪಾಲ ಎನ್ ರಾಮಚಂದ್ರ ಭಟ್ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಈ.ಎಚ್ ಗೋವಿಂದ ಭಟ್ ವಂದಿಸಿದರು. ಅಧ್ಯಾಪಕ ಶ್ರೀನಿವಾಸ ಕೆ.ಎಚ್ ನಿರೂಪಿಸಿದರು. ಯು.ಪಿ ಶಾಲಾ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಪ್ರಾರ್ಥಿಸಿದರು. ಮಂಜೇಶ್ವರ ಉಪಜಿಲ್ಲೆಯ ಹಲವು ಶಾಲೆಗಳ ಮುಖ್ಯ ಶಿಕ್ಷಕರು, ಅಧ್ಯಾಪಕರು, ಪಿ.ಟಿ.ಎ ಪದಾಧಿಕಾರಿಗಳು, ಶಾಲಾ ವಿದ್ಯಾಸಂಸ್ಥೆಗಳ ಎಲ್ಲಾ ಅಧ್ಯಾಪಕ, ಸಿಬ್ಬಂಧಿ ವರ್ಗದವರ ಸಹಕಾರದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.


Share with

Leave a Reply

Your email address will not be published. Required fields are marked *