ಉಡುಪಿ: ಮುದರಂಗಡಿ ಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ; ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭಾರೀ ಅಂತರದಿಂದ ಗೆಲ್ಲಿಸಿ: ಗುರ್ಮೆ ಸುರೇಶ್ ಶೆಟ್ಟಿ

Share with

ಉಡುಪಿ: ಮುದರಂಗಡಿ ಶಕ್ತಿ ಕೇಂದ್ರದ ಸಭೆ ಮುದರಂಗಡಿಯ ಗಂಗಾಧರ್ ಶೆಟ್ಟಿ ಅವರ ಮನೆ ವಠಾರದಲ್ಲಿ ನಡೆಯಿತು.

ಮುದರಂಗಡಿ ಶಕ್ತಿ ಕೇಂದ್ರದ ಸಭೆ ಮುದರಂಗಡಿಯ ಗಂಗಾಧರ್ ಶೆಟ್ಟಿ ಅವರ ಮನೆ ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಭಾಗವಹಿಸಿ ಶಾಸಕ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ, ಜನಸಾಮಾನ್ಯರಿಗೆ ಸಿಗುವ ಸಾಮಾನ್ಯ ವ್ಯಕ್ತಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪಕ್ಷ ಮಾ.20ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.

ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಅಧಿಕ ಅಂತರದ ಮತಗಳಿಂದ ಗೆಲ್ಲಿಸಿ ನರೇಂದ್ರ ಮೋದಿ ಅವರನ್ನು ಮಗದೊಮ್ಮೆ ಪ್ರಧಾನಮಂತ್ರಿಯನ್ನಾಗಿಸಲು ನಾವೆಲ್ಲರೂ ಕಟ್ಟಿಬದ್ಧರಾಗೋಣ ಎಂದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಕಾಪು ಉಸ್ತುವಾರಿಗಳಾದ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿಗಳಾದ ಪ್ರವೀಣ್ ಪೂಜಾರಿ, ಮುದರಂಗಡಿ ಶಕ್ತಿ ಕೇಂದ್ರದ ಸಂಚಾಲಕರಾದ ಶಿವರಾಮ್ ಬಂಡಾರಿ, ಸಹ ಸಂಚಾಲಕರಾದ ರವೀಂದ್ರ ಪ್ರಭು, ಮುದರಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹಿನಿ ಮತ್ತು ಮುದರಂಗಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *