ವಿಟ್ಲ: ಶಾಸಕ ಅಶೋಕ್ ರೈ ಅವರು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆ ಇರುವ ಕಾರಣ ವಿಟ್ಲ ಭಾಗದ ಜನತೆಗೆ ಸಮಸ್ಯೆಯಾಗಿದ್ದು ಹಲವು ವರ್ಷಗಳಿಂದ ಇಲ್ಲಿ ಹೆರಿಗೆ ತಜ್ಞರನ್ನು ನೇಮಕ ಮಾಡಿಲ್ಲ. ಇದರಿಂದ ಗ್ರಾಮೀಣ ಭಾಗದ ಜನತೆಗೆ ತುಂಬಾ ಸಮಸ್ಯೆಯಾಗುತ್ತಿರುವ ಬಗ್ಗೆ ಶಾಸಕರ ಗಮನಕ್ಕೆ ತರಲಾಯಿತು ಹಾಗೂ ಡಯಾಲಿಸಿಸ್ ಕೇಂದ್ರ ಪ್ರಾರಂಭ ಮಾಡುವಂತೆ ಮನವಿಯನ್ನು ಸಲ್ಲಿಸಲಾಯಿತು.
ಸಮುದಾಯ ಕೇಂದ್ರದ ವೈದ್ಯೆ ಡಾ|ವೇದಾವತಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಹಿಮಾನ್, ಅಸ್ಮಾ, ಹಸೈನಾರ್, ಕರುಣಾಕರ್, ಲತಾವೇಣಿ, ಡಾ| ಐ.ಎ ಶೆಟ್ಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.