ಸೆಪ್ಟೆಂಬರ್ ನಲ್ಲಿ ಮೋದಿ ನಿವೃತ್ತಿ ಘೋಷಣೆ-ಸ್ಪೋಟಕ ಹೇಳಿಕೆ ನೀಡಿದ ಸಂಜಯ್ ರಾವತ್

Share with

ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಮೊದಲ ಬಾರಿಗೆ ನಾಗಪುರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿಯವರ ಈ ಭೇಟಿ ಕುರಿತಾಗಿ ಶಿವ ಸೇನೆ ನಾಯಕ ಸಂಜಯ್ ರಾವತ್ ಅವರು ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸೆಪ್ಟೆಂಬರ್ ನಲ್ಲಿ ಪ್ರಧಾನಿ ಮೋದಿಯವರು ನಿವೃತ್ತಿಯನ್ನು ಘೋಷಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ಅವರು ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದ್ದಾರೆ ಎಂದು ಸಂಜಯ್ ರಾವತ್ ಹೇಳಿರುವುದು ಇದೀಗ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಮೋದಿ ಕಳೆದ 10-11 ವರ್ಷಗಳಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಗೆ ಭೇಟಿ ನೀಡಿಲ್ಲ. ಆದರೆ ಈಗ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ‘ಟಾಟಾ, ಬೈ, ಬೈ’ ಹೇಳಲು ಹಾಗೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಉತ್ತರಾಧಿಕಾರಿಯನ್ನು ಆರ್‌ಎಸ್‌ಎಸ್ ನಿರ್ಧರಿಸುತ್ತದೆ ಎಂದು ಸಂಜಯ್ ರಾವತ್ ಹೇಳಿಕೊಂಡಿದ್ದಾರೆ,


Share with

Leave a Reply

Your email address will not be published. Required fields are marked *