ಮೂಡುಸಗ್ರಿ: ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Share with

Akashaya College

ಉಡುಪಿ: ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸಮೀಪದ ಮನೆಯ ಹಿಂಭಾಗದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ.

ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ ಬಳಿಕ ಕಳೇಬರವನ್ನು ಮಣಿಪಾಲ ಕೆ.ಎಂ.ಸಿ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲಾಯಿತು. ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಅಸ್ಥಿಪಂಜರದ ಸಾಗಟ ನಡೆಸಲು ಇಲಾಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಿ ನೆರವಾದರು. ಅಸ್ಥಿ ಪಂಜರ ಪತ್ತೆಯಾಗಿರುವ ಸ್ಥಳದ ಮಾಲೀಕರು ಮುಂಬೈಯಲ್ಲಿ ವಾಸವಾಗಿದ್ದು, ಅವರು ಊರಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಘಟನ ಸ್ಥಳಕ್ಕೆ ಡಿ.ವೈ.ಎಸ್.ಪಿ- ಟಿ.ಡಿ ಪ್ರಭು, ಉಡುಪಿ ಉಪ ವಿಭಾಗ, ಡಿ.ವಿ. ದೇವರಾಜ್ ಸರ್ಕಲ್ ಇನ್ಸ್‌ಪೆಕ್ಟರ್, ಪಿ.ಎಸ್ ಐ ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿದರು.


Share with

Leave a Reply

Your email address will not be published. Required fields are marked *