ಹುಬ್ಬಳ್ಳಿಯಲ್ಲಿ ಯುವತಿಯ ಕೊಲೆ; ಸಿದ್ದರಾಮಯ್ಯನವರೇ ಇದೇನಾ ನಿಮ್ಮ ಸರ್ವಜನಾಂಗದ ಶಾಂತಿಯ ತೋಟ

Share with

ಉಡುಪಿ: ಹುಬ್ಬಳ್ಳಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣ ಇಡಿ ರಾಜ್ಯವೇ ಬೆಚ್ಚಿ ಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ, ತುಷ್ಠೀಕರಣ ನೀತಿಯಿಂದಾಗಿ ಮುಸ್ಲಿಂ ಸಮುದಾಯದ ಮದೋನ್ಮತ್ತರು ಕಾಯಿದೆಯ ಭಯವಿಲ್ಲದೇ ಕೊಲೆ, ದೊಂಬಿ, ನೈತಿಕ ಪೊಲೀಸ್ ಗಿರಿ, ದೇಶ ವಿರೋಧಿ ಘೋಷಣೆ, ಅಲ್ಲಾಹು ಅಕ್ಬರ್ ಎಂದು ಮಾತ್ರ ಹೇಳಬೇಕೆಂಬ ಸಾರ್ವಜನಿಕ ಆಗ್ರಹ ನಡೆಸುತ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.
ಹುಬ್ಬಳಿಯಲ್ಲಿ ನಡೆದ ಈ ಬರ್ಭರ ಹತ್ಯೆಯನ್ನು ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೊಲೆ ಎಂದು ಸಾಮಾನ್ಯೀಕರಿಸುವುದು ಸರಿಯಲ್ಲ. ಇದರ ಹಿಂದೆ ಇರುವುದು ಈ ದೇಶದ ಕಾನೂನನ್ನು ಧಿಕ್ಕರಿಸುವ ಮಾನಸಿಕತೆ ಅಡಗಿದೆ ಎಂದು ಆರೋಪಿಸಿದ್ರು.
ಹಾವೇರಿಯಲ್ಲಿ ಹಿಂದು ಯುವಕನ ಜತೆ ಬಂದ ಮುಸ್ಲಿಂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ತಾಲೀಬಾನಿ ಮನಃಸ್ಥಿತಿ, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಮಾಡಿದವರನ್ನು ಸಮರ್ಥಿಸುವ ಮನಃಸ್ಥಿತಿ, ಸಹೋದ್ಯೋಗಿಗೆ ಮನೆಗೆ ಡ್ರಾಪ್ ಕೊಟ್ಟ ಹಿಂದು ಯುವಕನ ಮೇಲೆ ಹಲ್ಲೆ ನಡೆಸಿದ ನೈತಿಕ ಪೊಲೀಸ್ ಗಿರಿಯ ಮನಃಸ್ಥಿತಿ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಡುವ ವಿಧ್ವಂಸಕ ಮನಃಸ್ಥಿತಿ, ರಾಮನವಮಿಯ ದಿನ ಜೈ ಶ್ರೀರಾಮ್ ಎಂದವರ ಮೇಲೆ ಹಲ್ಲೆ ಮಾಡುವ ಮನಃಸ್ಥಿತಿ, ಈಗ ಹುಬ್ಬಳ್ಳಿಯಲ್ಲಿ ಹಾಡಹಗಲೆ ಹಿಂದು ಯುವತಿಯನ್ನು ಬರ್ಭರವಾಗಿ ಹತ್ಯೆ ಮಾಡುವ ಮನಃಸ್ಥಿತಿ ಎಲ್ಲವೂ ಒಂದೆ !
ಇದರ ಹಿಂದಿರುವ ಧೈರ್ಯ ಯಾವುದು ಗೊತ್ತೇ ?
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ.
ಸಿದ್ದರಾಮಯ್ಯನವರೇ ಇದೇನಾ ನೀವು ಕಂಡ ಕನಸಿನ ಸರ್ವಜನಾಂಗದ ಶಾಂತಿಯ ತೋಟ? ಎಂದು ಪ್ರಶ್ನಿಸಿದ್ದಾರೆ.


Share with

Leave a Reply

Your email address will not be published. Required fields are marked *