ಮಾ.24ರಂದು ಕೊಂಡೆವೂರು ಮಠದಲ್ಲಿ ನವಗ್ರಹ ಪ್ರತಿಷ್ಟೆ ಹಾಗೂ ಅಷ್ಟೋತ್ತರ ಸಹಸ್ರ ನವಗ್ರಹ ಯಾಗ; ಮಾ.23ರಂದು ಹೊರೆಕಾಣಿಕೆ

Share with

ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ನೇತೃತ್ವದಲ್ಲಿ ಕಟೀಲು ಕ್ಷೇತ್ರದ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಅನಂತಪದ್ಮನಾಭ ಅಸ್ರಣ್ಣರ ನಿರ್ದೇಶನದೊಂದಿಗೆ ಮತ್ತು ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಅಸ್ರಣ್ಣರವರ ಆಚಾರ್ಯತ್ವದಲ್ಲಿ ನವಗ್ರಹ ಪ್ರತಿಷ್ಟೆ ಹಾಗೂ ಲೋಕ ಕಲ್ಯಾಣಾರ್ಥವಾಗಿ ಅಷ್ಟೋತ್ತರ ಸಹಸ್ರ ನವಗ್ರಹ ಯಾಗ ಮಾ.24ರಂದು ನಡೆಯಲಿದೆ.

ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ನೇತೃತ್ವದಲ್ಲಿ ನವಗ್ರಹ ಪ್ರತಿಷ್ಟೆ ಹಾಗೂ ಲೋಕ ಕಲ್ಯಾಣಾರ್ಥವಾಗಿ ಅಷ್ಟೋತ್ತರ ಸಹಸ್ರ ನವಗ್ರಹ ಯಾಗ ಮಾ.24ರಂದು ನಡೆಯಲಿದೆ.

ಇದರ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ನಾಳೆ ಸಂಜೆ 4.30ಕ್ಕೆ ಉಪ್ಪಳ ಪೇಟೆಯಿಂದ ವಾದ್ಯಘೋಷದೊಂದಿಗೆ ಹೊರಡಲಿದೆ. ಸಂಜೆ 6ಕ್ಕೆ ಪ್ರಾಸಾದ ಶುದ್ದಿ ಸಹಿತ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಲಿದೆ.

24ರಂದು ಪ್ರಾತಕಾಲ ಪ್ರಾರ್ಥನೆ, ಪುಣ್ಯಾಹ ವಾಚನ, ಆಚಾರ್ಯವರಣ, ಬೆಳಿಗ್ಗೆ 7.30ಕ್ಕೆ ಅಷ್ಟೋತ್ತರ ಸಹಸ್ರ ನವಗ್ರಹ ಯಾಗ ಪ್ರಾರಂಭ, ಪೂರ್ವಾಹ್ನ 9.58ರ ಮುಹೂರ್ತದಲ್ಲಿ ನವಗ್ರಹ ಪ್ರತಿಷ್ಟೆ, 10.30ಕ್ಕೆ ಯತಿಶ್ರೇಷ್ಟರಾದ ಉಡುಪಿ ಅದಮಾರು ಮಠದ ಈಶ ಪ್ರಿಯ ತೀರ್ಥ ಶ್ರೀಪಾದಂಗಳವರು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕರಿಂಜೆ ಶ್ರೀ ಕ್ಷೇತ್ರದ ಶ್ರೀ ಮುಕ್ತಾನಂದ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ, 11ಕ್ಕೆ ಸ್ವಾಮೀಜಿಯವರಿಂದ ಅನುಗ್ರಹ ಸಂದೇಶ, 11.30ಕ್ಕೆ ನವಗ್ರಹ ಯಾಗದ ಪೂರ್ಣಾವತಿ, ಮಧ್ಯಾಹ್ನ 1ಕ್ಕೆ ಪ್ರಸನ್ನ ಪೂಜೆ, ಅನ್ನಸಂತರ್ಪಣೆ, ಅಪರಾಹ್ನ 2.30ಕ್ಕೆ ಆಳ್ವಾಸ್ ಸಾಂಸ್ಕತಿಕ ವೈಭವ ನಡೆಯಲಿದೆ.


Share with

Leave a Reply

Your email address will not be published. Required fields are marked *