ಕಾಸರಗೋಡು: ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜು.31ರಂದು ನೀಲೇಶ್ವರ ಬಂಗಳದಲ್ಲಿ ನಡೆದಿದೆ.
![](https://i0.wp.com/veekshakavani.com/wp-content/uploads/2023/08/New-Project-38.jpg?resize=640%2C400&ssl=1)
ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16 ವ) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ ಎನ್ನಲಾಗಿದೆ.