ಸೌಜನ್ಯಾಳ ನ್ಯಾಯಕ್ಕಾಗಿ ನೋಟಾ ಜಾಗೃತಿ ಅಭಿಯಾನ; ನೋಟ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಸಂದೇಶ ನೀಡಲು ಸಾಧ್ಯ: ಮಹೇಶ್ ಶೆಟ್ಟಿ ತಿಮರೋಡಿ

Share with

ಉಡುಪಿ: ಉಜಿರೆಯ ಎಸ್‌ಡಿಎಂ ಕಾಲೇಜಿನ 17 ವರ್ಷದ ಹೆಣ್ಣುಮಗಳು ಸೌಜನ್ಯ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಕೊಲೆಯಾಗಿ 11 ವರ್ಷಗಳು ಕಳೆದಿವೆ. ನೈಜ ಅಪರಾಧಿಗಳ ಬಂಧನ ಇನ್ನೂ ಆಗಿಲ್ಲ, ಸೌಜನ್ಯ ತಾಯಿ ಕುಸುಮಾವತಿ ನ್ಯಾಯಕ್ಕಾಗಿ ಹರಿಸಿದ ಕಣ್ಣೀರು ಅಧಿಕಾರದಲ್ಲಿರುವ ಯಾವ ಪಕ್ಷದ ನಾಯಕರಿಗೂ ಕಾಣಲಿಲ್ಲ. ಹೆತ್ತಕರುಳಿನ ಕೂಗು ಇವರಿಗೆ ಕೇಳಿಸಲಿಲ್ಲ. ಇದೀಗ ಸೌಜನ್ಯಾ ಕುಟುಂಬದ ನ್ಯಾಯಕ್ಕಾಗಿ ನೋಟ ಅಭಿಯಾನ ಆರಂಭಿಸಿದ್ದು, ಅದಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗಿದೆ ಎಂದು ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ.

ಉಡುಪಿಯಲ್ಲಿ ಏಪ್ರಿಲ್ 17ರಂದು ನಡೆದ ಸುದ್ದಿಗೋಷ್ಠಿ

ಉಡುಪಿಯಲ್ಲಿ ಏಪ್ರಿಲ್ 17ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯಾದ್ಯಂತ ಮತದಾರರು ‘ನೋಟ’ಕ್ಕೆ ಮತ ನೀಡುವಂತೆ ಜನಜಾಗೃತಿ ಪ್ರಾರಂಭಿಸಿದ್ದೇವೆ. ನೋಟ, ಚುನಾವಣಾ ಆಯೋಗವೇ ಜನರಿಗೆ ನೀಡಿರುವ ಅಧಿಕಾರ. ಮತದಾನ ಬಹಿಷ್ಕಾರ ಮಾಡುವುದು ತಪ್ಪು. ಆದರೆ ನೋಟ ಚಲಾಯಿಸುವ ಮೂಲಕ ನಾವು ರಾಜಕೀಯ ಪಕ್ಷಗಳಿಗೆ ಸಂದೇಶ ನೀಡಲು ಸಾಧ್ಯವಿದೆ ಎಂದರು.

ಈ ಹಿನ್ನೆಲೆಯಲ್ಲಿ ವ್ಯಾಪಕ ಅಭಿಯಾನ ಆರಂಭಿಸಿದ್ದು, ಸೌಜನ್ಯಳಿಗೆ ನ್ಯಾಯ ಬಯಸುವ ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಕೈಜೋಡಿಸಬೇಕು. ಈಗಾಗಲೇ ಕಾಂಗ್ರೆಸ್ ,ಬಿಜೆಪಿ ಪಕ್ಷಗಳ ಸಹಿತ ಹಿಂದೂ ಸಂಘಟನೆಗಳು, ದಲಿತ ಸಂಘಟನೆಗಳೂ ಸೇರಿದಂತೆ ಹಲವು ಸಂಘಟನೆಗಳು ನಮಗೆ ಬೆಂಬಲ ವ್ಯಕ್ತಪಡಿಸಿವೆ ಎಂದು ತಿಳಿಸಿದರು.


Share with

Leave a Reply

Your email address will not be published. Required fields are marked *