ಪಡುಬಿದ್ರಿ: ಪಲಿಮಾರು ಬಳಿ ದ್ವಿ-ಚಕ್ರ ವಾಹನಕ್ಕೆ ಬಸ್ಸೊಂದು ಡಿಕ್ಕಿಯಾದ ಪರಿಣಾಮವಾಗಿ ಸವಾರ ಸಾವನ್ನಪ್ಪಿದ ಘಟನೆ ಜ.7ರಂದು ರಾತ್ರಿ ಸಂಭವಿಸಿದೆ.
ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ಜ.7ರಂದು ರಾತ್ರಿ ನಾಟಕ ನೋಡಲು ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಡಿಕ್ಕಿಯಾಗಿ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು (17) ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ತುಷಾರ್ ಪಲಿಮಾರು ಹಾಗೂ ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತವು ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿಯು ಹಾನಿಗೊಳಗಾಗಿದೆ.