ಭದ್ರಾ ನದಿಯ ಆರ್ಭಟಕ್ಕೆ ಜನರಲ್ಲಿ ಆತಂಕ!

Share with

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದೆ. ಬಾಳೆಹೊನ್ನೂರು- ಕಳಸ ಸಂಪರ್ಕಿಸುವ ಮಹಲ್ಲೋಡು ಸೇತುವೆ ಮುಳುಗಿದೆ.

ಭದ್ರಾ ಆರ್ಭಟಕ್ಕೆ ಸೇತುವೆ ಸಂಪೂರ್ಣ ಮುಳುಗಿದೆ. ಮಾಗುಂಡಿ ಗ್ರಾಮ ದ್ವೀಪದಂತಾಗಿದೆ. ಮಾಗುಂಡಿಯಿಂದ ಹುಯಿಗೆರೆ, ಬಿಕ್ಕರಣೆ, ಮಣಬೂರು, ಸಾರಗೋಡು, ಕರಗಣೆ ಸಂಪರ್ಕ ಬಂದ್ ಆಗಿದೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹಟ್ಟಿಹಾಡಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿಯುತ್ತಿದೆ. ಮನೆ ತೊರೆಯಲು ನಿವಾಸಿಗಳಿಗೆ ಅಧಿಕಾರಿಗಳು ಸೂಚಿಸಿದ್ದಾರೆ.


Share with