ಮಂಗಳೂರು: ಕಳೆದ ವರ್ಷ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೊಳಗಾಗಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್.ಐ.ಎ ಆರೋಪಿಯ ಸುಳಿವಿಗೆ 2 ಲಕ್ಷ ಬಹುಮಾನವನ್ನು ಘೋಷಣೆ ಮಾಡಿದೆ.


ಆರೋಪಿ ನಂ.23 ನೌಷಾದ್ ನ ಸುಳಿವಿಗೆ 2 ಲಕ್ಷ ಬಹುಮಾನ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಮೀದ್ ಮಗ ನೌಷಾದ್ ನಿಷೇದಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದು, ಘಟನೆ ಬಳಿಕ ನೌಷಾದ್ ತಲೆ ಮರೆಸಿಕೊಂಡಿದ್ದರಿಂದ ಈತನನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ. ಇವನ ಪತ್ತೆಗೆ ಇದೀಗ ಎನ್ ಐ ಎ ರಿವಾರ್ಡ್ ನೋಟಿಸ್ ಘೋಷಿಸಿದೆ.




