ಬಂಟ್ವಾಳ: ಚಿಕ್ಕಮಗಳೂರಿನಲ್ಲಿ ವಕೀಲರಾದ ಪ್ರೀತಮ್ ಎಂ.ಟಿ ಅವರಿಗೆ ಪೊಲೀಸ್ ದೌರ್ಜನ್ಯವಾಗಿದೆ ಎಂದು ಆರೋಪಿಸಿ, ಬಂಟ್ವಾಳದ ವಕೀಲರ ಸಂಘದ ವತಿಯಿಂದ ಡಿ.4ರಂದು ಜೆ.ಎಂ.ಎಫ್.ಸಿ ನ್ಯಾಯಾಲಯ ಎದುರು ಪ್ರತಿಭಟನೆ ನಡೆಯಿತು.
ಬಳಿಕ ಬಂಟ್ವಾಳ ತಹಶೀಲ್ದಾರ್ ಮೂಲಕ ಗೃಹಸಚಿವರಿಗೆ ಮನವಿಯನ್ನು ಸಲ್ಲಿಸಲಾಯಿತು. ಆರೋಪಿ ಪೋಲೀಸರನ್ನು ತಕ್ಷಣ ಬಂಧಿಸಬೇಕು ಮತ್ತು ಅವರ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣ ಸರಕಾರ ವಕೀಲರ ರಕ್ಷಣಾ ಕಾಯಿದೆ ಜಾರಿಗೊಳಿಸಬೇಕು ಎಂದು ಈ ಸಂದರ್ಭ ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಕುಮಾರ್ ವೈ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ, ವಕೀಲರಾದ ಮೋಹನ್ ಕಡೇಶಿವಾಲ್ಯ ಹಾಗೂ ಬಂಟ್ವಾಳ ವಕೀಲರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.