ಪುತ್ತೂರು: ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ..!

Share with

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದ್ರಶೇಖರ ಭಟ್ (62) ಎಂಬವವರು ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್ಡೇಟ್ ಮಾಡುವ ಕುರಿತು ಸಂದೇಶ ಬಂದಿದ್ದು, ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ. ಒಟಿಪಿ ನೀಡುವಂತೆ ತಿಳಿಸಿದ್ದಾರೆ. ಅದರಿಂದ ಭಟ್ ಅವರು ಒಟಿಪಿ ನೀಡಿದ್ದಾರೆ. ಒಟಿಪಿ ನೀಡಿದ ನಂತರ ಅವರ ಬ್ಯಾಂಕ್ ಖಾತೆಯಿಂದ 1.73 ಲಕ್ಷ ರೂಪಾಯಿ ಹಣ ಕಡಿತಗೊಂಡಿದೆ.

ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ವಂಚಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 24-2024 ಕಲಂ: IPC 1860 ಕಲಂ-417,419,420 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Share with

Leave a Reply

Your email address will not be published. Required fields are marked *