
ಪುತ್ತೂರು : ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರ ಎಳೆದು ಪರಾರಿಯಾಗಿರುವ ಘಟನೆ ನಡೆದಿದೆ. ರಾತ್ರಿ ವೇಳೆ, ಅಪರಿಚಿತ ವ್ಯಕ್ತಿ ದಾರಿ ಕೇಳಿದ್ದಾನೆ. ಆಗ ದಾರಿ ಹೇಳಲು ಬಂದ ಮನೆಯವರ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ನಲ್ಲಿ ಬಂದ ವ್ಯಕ್ತಿ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.