ಖತರ್, ಬಹರೈನ್ ವಾಯುಪ್ರದೇಶ ಬಂದ್..! ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ

Share with

ಮಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಖತರ್ ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆದಿದ್ದು, ಈ ಘಟನೆಯ ಬಳಿಕ ಖತ‌ರ್, ಬಹರೈನ್ ವಾಯುಪ್ರದೇಶ ಮುಚ್ಚಲಾಗಿದೆ. ಇದರಿಂದಾಗಿ ಮಂಗಳೂರು ಅಂತ‌ರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ.

ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ ಎಂದು ತಿಳಿದು ಬಂದಿದೆ.

ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮೊದಲು ತಮ್ಮ ವಿಮಾನಗಳ ಸ್ಥಿತಿಯ ಕುರಿತು ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಸಂಜೆಯ ನಿರ್ಗಮನ: ದಮಾಮ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವನ್ನು ಮಸ್ಕತ್‌ಗೆ ತಿರುಗಿಸಲಾಗಿದೆ. ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಮುಂಬೈನಲ್ಲಿ ಇಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.


Share with

Leave a Reply

Your email address will not be published. Required fields are marked *