ಉಡುಪಿ : ಕರಾವಳಿಯ ಕೆಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದೆ. ಉಡುಪಿ, ಮಣಿಪಾಲ ಪರಿಸರದಲ್ಲಿ ಹನಿಮಳೆಯಾಗಿದೆ. ಮಡಾಮಕ್ಕಿ, ಮೂರುಕೈ, ಆರ್ಡಿ ಪ್ರದೇಶದಲ್ಲಿ ಸಂಜೆ ವೇಳೆ ಸಾಮಾನ್ಯ ಮಳೆಯಾಗಿದೆ.
ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಎಪ್ರಿಲ್ 13 ರಂದು 14ರಂದು ಎಲ್ಲೋ ಅಲರ್ಟ್ ಘೋಷಿಸಿದೆ. ಅದರಂತೆ ಮಳೆ, ಗಾಳಿ ಇರುವ ಸಾಧ್ಯತೆ ಇದೆ. ಸದ್ಯ ತಾಪಮಾನ ಹೆಚ್ಚಿದ್ದು ಜನರು ಬೇಸಿಗೆ ಮಳೆಯ ನಿರೀಕ್ಷೆಯಲ್ಲಿದ್ದಾರೆ.