ಮಂಜೇಶ್ವರ: ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಜೇಶ್ವರ ಖಂಡ್ ವತಿಯಿಂದ ವಿಜಯದಶಮಿ ಪ್ರಯುಕ್ತ ಪಥಸಂಚಲನ ಹಾಗೂ ಸಾರ್ವಜನಿಕ ಸಮಾರಂಭ ಭಾನುವಾರ ಬೆಳಿಗ್ಗೆ ನಡೆಯಿತು. ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಪರಿಸರದಿಂದ ಹೊರಟ ಪಥ ಸಂಚಲನ ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಪರಿಸರದಲ್ಲಿ ಸಮಾಪ್ತಿಗೊಂಡಿತು. ಬಳಿಕ ನಡೆದ ಸಾರ್ವಜನಿಕ ಸಮಾರಂದಲ್ಲಿ ನಿವೃತ್ತ ಯೋಧರಾದ ಸುನಿಲ್ ಕುಮಾರ್ ಮಂಜೇಶ್ವರ ಅಧ್ಯಕ್ಷತೆ ವಹಿಸಿದ್ದರು. ರಾ ಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಆಮಂತ್ರಿತ ಸದಸ್ಯರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ರವರು ಬೌಧಿಕ್ ಮಾಡಿದರು. ಆರ್.ಎಸ್.ಎಸ್ ಕಣ್ಣೂರು ವಿಭಾಗ ಕಾರ್ಯವಾಹ ಲೊಕೇಶ್ ಜೋಡುಕಲ್ಲು ಉಪಸ್ಥಿತರಿದ್ದರು. ಪಥಸಂಚಲನದಲ್ಲಿ ಸಾವಿರಾರು ಮಂದಿ ಸ್ವಯಂಸೆವಕರು ಭಾಗವಹಿಸಿದರು.