ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ

Share with

ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ನನ್ನು ರಕ್ಷಣೆ ಮಾಡುವಲ್ಲಿ ಎನ್‌ಡಿಆರ್‌ಎಫ್‌ ತಂಡವು ಯಶಸ್ವಿಯಾಗಿದೆ.

ಇದೀಗ ಬಾಲಕನನ್ನು ಆಸ್ಪತ್ರೆಯತ್ತ ಕರೆದೊಯ್ಯಲಾಗುತ್ತಿದೆ. ಸತೀಶ್, ಪೂಜಾ ದಂಪತಿಯ ಮಗ ಸಾತ್ವಿಕ್ ಆಟವಾಡುತ್ತಾ ಆಯತಪ್ಪಿ 20 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಟ ಆರಂಭಿಸಿದ್ದ.

ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಸ್ಥಳಕ್ಕಾಗಮಿಸಿದ ಬೆಳಗಾವಿ, ಕಲಬುರಗಿ ಹಾಗೂ ಹೈದರಾಬಾದ್‌ ಎನ್‌ಡಿಆರ್‌ಎಫ್‌ ತಂಡವು ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. ಇದಕ್ಕೆ ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಸಾಥ್ ನೀಡಿದರು.

ಸುದೀರ್ಘ ಕಾರ್ಯಾಚರಣೆಯಿಂದ ಬಾಲಕ ತಾಯಿಯ ಮಡಿಲು ಸೇರಿದ್ದಾನೆ


Share with

Leave a Reply

Your email address will not be published. Required fields are marked *