ರಸ್ತೆ ಅಪಘಾತದಲ್ಲಿ ಗಾಯಾಳುವಿಗೆ ಸಹಾಯ ಮಾಡುವವರಿಗೆ 25 ಸಾವಿರ ರೂ.ಬಹುಮಾನ ಘೋಷಣೆ:ನಿತಿನ್ ಗಡ್ಕರಿ

Share with

ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವ ಪರೋಪಕಾರಿಗಳಿಗೆ ರೂ.25 ಸಾವಿರ ಬಹುಮಾನ ನೀಡುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ನಾಗಪುರದಲ್ಲಿ ನಡೆದ ರಸ್ತೆ ಸುರಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ ಅವರು, ಅಪಘಾತವಾದಾಗ ಮೊದಲ 1 ಗಂಟೆ ನಿರ್ಣಾಯಕವಾಗಿದ್ದು, ಆ ಅವಧಿಯಲ್ಲಿ ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಸಾಗಿಸುವ ವ್ಯಕ್ತಿಗೆ ಈಗ ನೀಡುತ್ತಿರುವ ಸಾವಿರ ರೂ.ಬಹುಮಾನ ಸಾಲುತ್ತಿಲ್ಲ. ಹೀಗಾಗಿ ಅವರಿಗೆ 25 ಸಾವಿರ ರೂ. ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕೇಂದ್ರ ಸರಕಾರವು, ಅಪಘಾತಗಳಲ್ಲಿ ಗಾಯಗೊಂಡವರಿಗೆ ಮೊದಲ 7 ದಿನಗಳವರೆಗೆ 1.5 ಲಕ್ಷರೂ. ವರೆಗಿನ ಆಸ್ಪತ್ರೆ ವೆಚ್ಚವನ್ನು ಸಹ ಭರಿಸಲಿದೆ. ಇದು ರಾಜ್ಯ ಹೆದ್ದಾರಿಗಳಲ್ಲಿ ಗಾಯಗೊಂಡರೂ ಅನ್ವಯಿಸುತ್ತದೆ ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಅಪಘಾತಕ್ಕೊಳಗಾದವರಿಗೆ ಸಹಾಯ ಮಾಡುವವರಿಗೆ ಬಹುಮಾನ ನೀಡುವ ಯೋಜನೆಯನ್ನು ಅಕ್ಟೋಬರ್ 2021 ರಲ್ಲಿ ಪ್ರಾರಂಭಿಸಲಾಯಿತು.

ಈ ಯೋಜನೆಯ ಪ್ರಕಾರ, ಮಾರಣಾಂತಿಕ ಅಪಘಾತಕ್ಕೊಳಗಾದವರ ಜೀವವನ್ನು ಉಳಿಸುವ ಜನರಿಗೆ ತಕ್ಷಣದ ಸಹಾಯವನ್ನು ಒದಗಿಸಿ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಗೋಲ್ಡನ್ ಅವರ್ (ಅಪಘಾತದ ನಂತರ ಮೊದಲ ಗಂಟೆ) ಒಳಗೆ ಆಸ್ಪತ್ರೆಗೆ ಸಾಗಿಸುವವರಿಗೆ ಬಹುಮಾನ ನೀಡಲಾಗುತ್ತದೆ.


Share with