ನಂತೂರು: ಟ್ಯಾಂಕರ್ ಹರಿದು ಪ್ರಾಣ ಕಳೆದುಕೊಂಡ ದ್ವಿಚಕ್ರ ಸವಾರ..!

Share with

ಮಂಗಳೂರಿನ ನಂತೂರು ಪದವು ಬಳಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ.

ನಂತೂರು ಪದವು ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ಸ್ಕೂಟಿ ರಸ್ತೆಗೆ ಉರುಳಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎಂದು ಹೇಳಲಾಗಿದೆ.

ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಸಂಚಾರ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Share with