
ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸಲಿದೆ ಎಂಬುದು ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

‘ಗ್ಯಾರಂಟಿ’ಗಳಿಗೆ ಹಣದ ಕೊರತೆಯಿಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಇರುತ್ತವೆ. ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಪಂಚ ಗ್ಯಾರಂಟಿಗಳನ್ನು ಮನೆ-ಮನೆಗೆ ತಲುಪಿಸಿದ್ದೇನೆ. ಆದರೆ, ಬಿಜೆಪಿಯವರು ನಿರಂತರವಾಗಿ ಸುಳ್ಳು ಹರಡುತ್ತಾ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.




