ತಹಶೀಲ್ದಾರ್ ವಿರುದ್ಧ ಸಾಲುಮರದ ತಿಮ್ಮಕ್ಕ ಗೃಹಸಚಿವರಿಗೆ ದೂರು

Share with

ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ ಅವರಿಗೆ ಸಾಲು ಮರದ ತಿಮ್ಮಕ್ಕ ದೂರು ನೀಡಿದ್ದಾರೆ.

ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ಸಾಲು ಮರದ ತಿಮ್ಮಕ್ಕ ನೆಟ್ಟಿದ್ದ ಮರಗಳನ್ನು ಕಡಿದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಸುಮಾರು ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ಬೇಲೂರು ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ತಹಶೀಲ್ದಾರ್ ವಿರುದ್ಧ ಗೃಹ ಸಚಿವರಿಗೆ ಸಾಲು ಮರದ ತಿಮ್ಮಕ್ಕ ದೂರು ಕೊಟ್ಟಿದ್ದಾರೆ. 


Share with

Leave a Reply

Your email address will not be published. Required fields are marked *