ಶಾಲೆಯ ಮೇಲ್ಚಾವಣಿ ಕುಸಿತ; ತಪ್ಪಿದ ಅನಾಹುತ!

Share with

ಸರ್ಕಾರಿ ಶಾಲೆಯ ಮೇಲಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯವಾದ ಘಟನೆ ದ.ಕನ್ನಡದ ಕಡಬ ತಾಲೂಕಿನ ಕುಂತೂರಿನಲ್ಲಿ ನಡೆದಿದೆ. ಅದೃಷ್ಟವಶಾತ್ 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಫೀಲ್ಡ್ ಇಂಜಿನಿಯರ್‌ನನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ. ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಶಾಲೆಯಲ್ಲಿ ಮಕ್ಕಳನ್ನಿರಿಸಿಕೊಂಡು ರಿಪೇರಿ ಕಾರ್ಯ ಮಾಡುತ್ತಿದ್ದ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.


Share with