ಉಡುಪಿ: ಹಿರಿಯ ಟೂರಿಸ್ಟ್ ಬಸ್ ಏಜೆಂಟ್ ಸ್ಟ್ಯಾನ್ಲಿ ಸುಧಾಕರ್ ಸಾಲಿನ್ಸ್ ನಿಧನ

Share with

ಉಡುಪಿ: ಟೂರಿಸ್ಟ್ ಬಸ್ ಏಜೆಂಟಾಗಿ ಕಾರ್ಯ ನಿರ್ವಹಿಸುತ್ತಿದ್ದ  ಹಿರಿಯ ಬಸ್ ಏಜೆಂಟ್ ಸ್ನೇಹ ಜೀವಿ
ಸ್ಟ್ಯಾನ್ಲಿ  ಸುಧಾಕರ್ ಸಾಲಿನ್ಸ್ (53)  ನಿಧನರಾಗಿದ್ದಾರೆ.
ಕಳೆದ ಐದು ದಿನಗಳ ಹಿಂದೆ ದಿಢೀರಾಗಿ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು‌. ಬಳಿಕ ಅಜ್ಜರಕಾಡು ಅಸ್ಪತ್ರೆಯಲ್ಲಿ  ಜೀವಣ್ಮರಣ ಹೋರಾಟದಲ್ಲಿದ್ದ ಸುಧಾಕರ್ ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಕಳೆದ 35 ವರ್ಷಗಳಿಂದ ಉಡುಪಿಯಲ್ಲಿ ಟೂರಿಸ್ಟ್ ಏಜೆಂಟಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಎಲ್ಲರೊಂದಿಗೂ  ನಗುತ್ತಾ ಬೆರೆತು ಬಾಳುವ ಸ್ವಭಾವ ಹೊಂದಿದ್ದ  ಅವರು ಸ್ನೇಹ ಜೀವಿಯಾಗಿದ್ದರು. ಪತ್ನಿ ಹಾಗೂ ಒಂದು ಗಂಡು ಮಗ ಹಾಗೂ ಹೆಣ್ಣು ಮಗಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರದಂದು ಉಚ್ಚಿಲದ ಸುಭಾಸ್ ರೋಡ್ ನಲ್ಲಿರುವ ಸ್ವಗೃಹದಲ್ಲಿ ವಿಧಿವಿಧಾನಗಳು ನಡೆಯಲಿದೆ.
ಅಗಲಿದ ಸುಧಾಕರ್ ರವರಿಗೆ ಅವರ ಅತ್ಮೀಯರು ,ಬಸ್ ಏಜೆಂಟ್ ಬಂಧುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *