ಬೆಳ್ತಂಗಡಿ: ಹಿರಿಯ ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ನಾಗರಾಜ ಪೂವಣಿ ನಿಧನ

Share with

ಬೆಳ್ತಂಗಡಿ: ಹಿರಿಯ ಸಾಹಿತಿ, ಪತ್ರಕರ್ತ, ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಹಿಂದಿ ಪ್ರಾಧ್ಯಾಪಕರಾದ ಪ್ರೊ.ನಾಗರಾಜ ಪೂವಣಿ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಉಜಿರೆಯ ಸ್ವಗೃಹದಲ್ಲಿ ಮಾ.11ರಂದು ಬೆಳಗ್ಗೆ ನಿಧನ ಹೊಂದಿದರು.

ಹಿರಿಯ ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ನಾಗರಾಜ ಪೂವಣಿ

ನಾ.ವುಜಿರೆ ಎಂದೇ ಜನಪ್ರಿಯರಾಗಿದ್ದ ಅವರು, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಜೀವನ ನಡೆಸುತ್ತಿದ್ದರು. ಅವರ ಪತ್ನಿ ಸರಸ್ವತಿ ಎನ್.ರಾಜ್ ಮತ್ತು ಒಬ್ಬ ಮಗ ಸೇರಿ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ. ಪುತ್ರ ವಿದೇಶದಲ್ಲಿದ್ದು, ವಿದೇಶದಿಂದ ಆಗಮಿಸಿದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲದಿಂದ ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *