ಶಿವಮೊಗ್ಗ ಈದ್ ಗಲಾಟೆ: ಠಾಣಾಧಿಕಾರಿ ಸೇರಿ ಮೂವರ ಅಮಾನತು

Share with

ಠಾಣಾಧಿಕಾರಿ ಸೇರಿ ಮೂವರ ಅಮಾನತು.

ಶಿವಮೊಗ್ಗ: ಈದ್​ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ನಡೆದ​ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಕಾನ್ಸ್​ಟೇಬಲ್​​ಗಳನ್ನು ಅಮಾನತುಗೊಳಿಸಲಾಗಿದೆ.

ಶಿವಮೊಗ್ಗ ಎಸ್.ಪಿ ಜಿ.ಕೆ ಮಿಥುನ್ ಕುಮಾರ್ ಸಲ್ಲಿಸಿದ​​ ವರದಿ ಆಧರಿಸಿ, ರಾಗಿಗುಡ್ಡ ಗಲಾಟೆ ನಿಭಾಯಿಸಲು ವಿಫಲವಾದ ಹಿನ್ನಲೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್​ ಅವರು ಪೋಲಿಸ್ ಠಾಣಾಧಿಕಾರಿ ಅಭಯ ಪ್ರಕಾಶ್ ಸೇರಿ ಕಾನ್ಸ್​ಟೇಬಲ್​ಗಳಾದ ಕಾಶಿನಾಥ್, ರಂಗನಾಥ್​ ಹಾಗೂ ಶಿವರಾಜ್ ಅವರನ್ನು ಅಮಾನತುಗೊಳಿಸಿ ​ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *