ಶಿರಸಿ: ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಮಂಗಳೂರಿನ ನಾಲ್ವರು ಸೇರಿ 5 ಮಂದಿ ಸಾವು

Share with

ಶಿರಸಿ: ಬಸ್‌ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಕುಮಟಾ-ಶಿರಸಿ ಹೆದ್ದಾರಿ ಬಳಿ ನಡೆದಿದ್ದು, ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ- ಕೈಕಂಬ ಪ್ರದೇಶದ ಕಿನ್ನಿಕಂಬಳದ ಒಂದೇ ಕುಟುಂಬದ ನಾಲ್ವರು ಹಾಗೂ ಚೆನ್ನೈ ಮೂಲದ ಕಾರು ಚಾಲಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಬಸ್‌ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತ

ಕಿನ್ನಿಕಂಬಳದ ರಾಮಕೃಷ್ಣರಾವ್ ಬಾಬುರಾವ್, ವಿದ್ಯಾಲಕ್ಷ್ಮೀ, ಪುಷ್ಪಾ ಮೋಹನ ರಾವ್, ಸುಹಾಸ ಗಣೇಶ್ ರಾವ್ ಹಾಗೂ ಚೆನ್ನೈನ ಅರವಿಂದ ಅವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರು ಶಿರಸಿಯಲ್ಲಿ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಶಿರಸಿ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಬಸ್‌.

ಶಿರಸಿ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಬಸ್‌ ಹಾಗೂ ಕುಮಟಾ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *