![](https://i0.wp.com/veekshakavani.com/wp-content/uploads/2024/05/IMG-20240520-WA0028.jpg?resize=992%2C945&ssl=1)
ಉಡುಪಿ: ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.
ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದನು. ಪ್ರಸ್ತುತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು, ಸೋಮವಾರ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ಹೋದಾಗ ಶಿಕ್ಷಕರು ಬೈದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.