ಮಂಗಳೂರು: ಅಂಗಡಿಯಲ್ಲಿ ಕೆಲಸಕ್ಕಿದ್ದ ಕಾರ್ಮಿಕನನ್ನು ಆಂಗಡಿಯ ಮಾಲಕ ಪೆಟ್ರೋಲ್ ಸುರಿದು ಬೆಂಕಿ ಕೊಟ್ಟು ಕೊಲೆ ಮಾಡಿದ ಆಘಾತಕಾರಿ ಘಟನೆ ಮಂಗಳೂರು ನಗರದ ಬೋಳಾರ ಮುಳಿಹಿತ್ಲು ಎಂಬಲ್ಲಿ ನಡೆದಿದೆ.
![](https://i0.wp.com/veekshakavani.com/wp-content/uploads/2023/07/images-10.jpeg?resize=620%2C320&ssl=1)
ಈ ಸಂಬಂಧ ಅಂಗಡಿಯ ಮಾಲಕನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಸುಮಾರು 35 ವರ್ಷ ಪ್ರಾಯದ ಉತ್ತರ ಭಾರತ ಮೂಲದ ಗಜ್ಞಾನ್ ಜಗು ಎಂದು ಗುರುತಿಸಲಾಗಿದೆ. ಘಟನೆ ಶನಿವಾರ ಬೆಳಗ್ಗೆ ನಡೆದಿದ್ದು, ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ.