ಪಂಜಿಕಲ್ ಪ್ರದೇಶದಲ್ಲಿ ಭೀತಿ ಹುಟ್ಟಿಸುತ್ತಿದ್ದ ಕಾಳಿಂಗ ಸರ್ಪವನ್ನು ಹಿಡಿದ ಸ್ನೇಕ್ ಕಿರಣ್

Share with

ಕಾಳಿಂಗ ಸರ್ಪವನ್ನು ಸ್ನೇಕ್ ಕಿರಣ್ ಅವರು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದರು.

ಬಂಟ್ವಾಳ: ಕಳೆದ ಎರಡು ತಿಂಗಳಿನಿಂದ ಬಂಟ್ವಾಳ ತಾಲೂಕಿನ ಪಂಜಿಕಲ್ ಪ್ರದೇಶದಲ್ಲಿ ಅಲ್ಲಲ್ಲಿ ಭೀತಿ ಹುಟ್ಟಿಸುತ್ತಿದ್ದ ಕಾಳಿಂಗ ಸರ್ಪವನ್ನು ಸ್ನೇಕ್ ಕಿರಣ್ ಅವರು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ ಬಗ್ಗೆ ವರದಿಯಾಗಿದೆ.

ಕಿರಣ್ ಅವರು ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ನಂತರ ಅರಣ್ಯ ಇಲಾಖೆಯ ಸಹಕಾರದಿಂದ ಕಾಳಿಂಗ ಸರ್ಪವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು

ಪಂಜಿಕಲ್ಲು ಗ್ರಾಮದ ಇನಿಲಕೋಡಿ ನಾರಾಯಣ ಬಂಗೇರ ಇವರ ಮನೆಯ ಅಂಗಳದಲ್ಲಿ ಸುಮಾರು 12 ಇಂಚು ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದ್ದು, ರೋಹಿಣಿ ಎಂಬವರು ತೋಟಕ್ಕೆ ಹೋಗಿ ವಾಪಾಸು ಮನೆಗೆ ಬರುವ ಸಂದರ್ಭದಲ್ಲಿ ಇವರಿಗೆ ಗೊತ್ತಿಲ್ಲದಂತೆ ಕಾಳಿಂಗ ಸರ್ಪಕ್ಕೆ ತುಳಿದಿದ್ದರು. ಆದರೆ ಕ್ಷಣಾರ್ಧದಲ್ಲಿ ಗಮನಕ್ಕೆ ಬಂದು ಅಪಾಯದಿಂದ ಪಾರಾಗಿದ್ಧಾರೆ.

ತಕ್ಷಣ ಮನೆಯವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬಂದ ಕಿರಣ್ ಅವರು ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ನಂತರ ಅರಣ್ಯ ಇಲಾಖೆಯ ಸಹಕಾರದಿಂದ ಕಾಳಿಂಗ ಸರ್ಪವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು ಎಂದು ತಿಳಿದು ಬಂದಿದೆ. ಕಾರ್ಯಾಚರಣೆಯಲ್ಲಿ ಸಿರಿಲ್ ಆಚಾರಿಪಾಲ್ಕೆ, ಧೀರಜ್ ನಾವುರ, ಅರಣ್ಯ ಸಿಬ್ಬಂದಿ ಸ್ಮಿತಾ ಹಾಗೂ ಜಯರಾಮ್ ಅವರು ಸಹಕರಿಸಿದ್ದಾರೆ.


Share with

Leave a Reply

Your email address will not be published. Required fields are marked *