ರಾಜ್ಯದಲ್ಲಿ ತಲೆದೋರಿರುವ ರಸಗೊಬ್ಬರ ಅಭಾವ ವಿರುದ್ಧ ನಾಳೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಂಡಿದೆ.

ಬೆಂಗಳೂರಿನಲ್ಲಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸರ್ಕಾರದ ವಿರುದ್ಧ ಹೋರಾಟ ಮಾಡೋದಾಗಿ ಘೋಷಿಸಿದ್ದಾರೆ. ಮುಂಗಾರು ಶೀಘ್ರ ಆರಂಭವಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಮುಂಚೆಯೇ ಸಿದ್ಧತೆ ಮಾಡಿಕೊಂಡಿಲ್ಲ, ಮುಂಚೆಯೇ ಕೇಂದ್ರಕ್ಕೆ ಪತ್ರ ಬರೆಯಬೇಕಿತ್ತು. ಈಗ ಪತ್ರ ಬರೆಯೋದಲ್ಲ. ರೈತರನ್ನು ಈ ಸರ್ಕಾರ ಬೀದಿಗೆ ತಂದಿದೆ ಎಂದು ಕಿಡಿ ಕಾರಿದ್ದಾರೆ.




